Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Wednesday, November 29, 2023

ಪಿಎಂ ವಿಶ್ವಕರ್ಮ ಯೋಜನೆ?

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Wednesday, November 29, 2023

ಶೀರ್ಷಿಕೆ: ಪಿಎಂ ವಿಶ್ವಕರ್ಮ ಯೋಜನೆ?


(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)

ಫೈಲ್ ಭಾಷೆ: ಕನ್ನಡ/ಇಂಗ್ಲಿಷ್

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ರಾಜ್ಯ: ಕರ್ನಾಟಕ

ಪ್ರಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪಿಎಂ ವಿಶ್ವಕರ್ಮ ಯೋಜನೆಯು ದೇಶದ ಕೋಟ್ಯಂತರ ಕುಶಲಕರ್ಮಿಗಳ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಇದರ ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯೋಣ. ಮುಂಬರಲಿರುವ ಅನೇಕ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಈ ಮಾಹಿತಿ ಸಹಾಯಕವಾಗಲಿದೆ


ಕೇಂದ್ರ ಸರ್ಕಾರದ 2023-24ನೇ ಸಾಲಿನ ಬಜೆಟ್‌ನಲ್ಲಿ 'ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ' ಅಥವಾ 'ಪಿಎಂ ವಿಶ್ವಕರ್ಮ ಯೋಜನೆಯನ್ನು' ಪ್ರಸ್ತಾಪಿಸಲಾಗಿತ್ತು. ಅದರಂತೆ ಆಗಸ್ಟ್ 15ರಂದು ಕೆಂಪು ಕೋಟೆಯ ಮೇಲೆ ನರೇಂದ್ರ ಮೋದಿ ಅವರು ಪಿಎಂ ವಿಶ್ವಕರ್ಮ ಯೋಜನೆ ಘೋಷಣೆ ಮಾಡಿದರು. ಘೋಷಣೆಯ ಭರವಸೆಯಂತೆ ಕಳೆದ ಸೆಪ್ಟೆಂಬರ್ 17ರಂದು ವಿಶ್ವಕರ್ಮ ಜಯಂತಿಯಂದು ಪಿಎಂ ವಿಶ್ವಕರ್ಮ ಯೋಜನೆಯನ್ನು ಜಾರಿಗೊಳಿಸಿದರು.

🍀ಏನಿದು ಯೋಜನೆ?

ದೇಶದ ಸಾಂಪ್ರದಾಯಿಕ ಕಲೆಗಳಿಗೆ ಉತ್ತೇಜನ ನೀಡುವ ಜೊತೆಗೆ, ಕುಶಲಕರ್ಮಿಗಳ ಅಭ್ಯುದಯಕ್ಕೆ ನೆರವು ಕಲ್ಪಿಸಲು 13 ಸಾವಿರ ಕೋಟಿ ರೂಪಾಯಿ ಮೊತ್ತದ ಯೋಜನೆ ಇದಾಗಿದೆ.

ದೇಶದಾದ್ಯಂತ ಇರುವ ಗ್ರಾಮೀಣ ಹಾಗೂ ನಗರ ಪ್ರದೇಶದ 18 ವರ್ಗದ ಕುಶಲಕರ್ಮಿಗಳಿಗೆ ಈ ಯೋಜನೆಯಡಿ ಕೌಶಲ ಅಭಿವೃದ್ಧಿ ತರಬೇತಿ, ತಾಂತ್ರಿಕ ಜ್ಞಾನ, ಹೊಸ ಉಪಕರಣ ಹಾಗೂ ಬ್ಯಾಂಕ್‌ ಖಾತರಿ ರಹಿತ ಸಾಲ ಸೌಲಭ್ಯ ದೊರೆಯಲಿದೆ. ಅವರು ತಯಾರಿಸುವ ಉತ್ಪನ್ನಗಳಿಗೆ ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಮಾರುಕಟ್ಟೆ ಸೌಲಭ್ಯ ಒದಗಿಸುವುದು ಯೋಜನೆಯ ಮೂಲ ಗುರಿಯಾಗಿದೆ.

ಕೇಂದ್ರ ಸರ್ಕಾರವೇ ಸಂಪೂರ್ಣವಾಗಿ ಈ ಯೋಜನೆಯ ಅನುದಾನವನ್ನು ಭರಿಸಲಿದೆ. ಹಿಂದುಳಿದ ವರ್ಗಗಳಿಗೆ ಸೇರಿದ ಒಟ್ಟು 30 ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ಇದರ ಪ್ರಯೋಜನ ಸಿಗಲಿದೆ ಎನ್ನಲಾಗಿದೆ.

ಕೇಂದ್ರ ಸರ್ಕಾರದ ಅತಿಸಣ್ಣ, ಸಣ್ಣ ಹಾಗೂ ಮಧ್ಯಮ ಉದ್ಯಮಗಳ ಸಚಿವಾಲಯವು ಈ ಯೋಜನೆಯ ನೋಡಲ್‌ ಏಜೆನ್ಸಿಯಾಗಿರುತ್ತದೆ. ಮುಖ್ಯವಾಗಿ ವಾಣಿಜ್ಯ ಬ್ಯಾಂಕ್‌ಗಳು, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳು, ಸಣ್ಣ ಪ್ರಮಾಣದ ಬ್ಯಾಂಕ್‌ಗಳು, ಸಹಕಾರ ಬ್ಯಾಂಕ್‌ಗಳು, ಬ್ಯಾಂಕೇತರ ಹಣಕಾಸು ಕ‍ಂಪನಿಗಳು, ಸಣ್ಣ ಹಣಕಾಸು ಸಂಸ್ಥೆಗಳಿಂದ ವಿಶ್ವಕರ್ಮ ಯೋಜನೆ ಫಲಾನುಭವಿಗಳಿಗೆ ಸಾಲ ಸೌಲಭ್ಯ ಸಿಗಲಿದೆ.

ಫಲಾನುಭವಿಗಳಿಗೆ ಶೇ 5ರಷ್ಟು ಬಡ್ಡಿದರ ನಿಗದಿಪಡಿಸಲಾಗಿದೆ. ಕೇಂದ್ರ ಸರ್ಕಾರವು ಸಂಬಂಧಪಟ್ಟ ಬ್ಯಾಂಕ್‌ಗಳು ಅಥವಾ ಇತರೆ ಹಣಕಾಸು ಸಂಸ್ಥೆಗಳಿಗೆ ಶೇ 8ರಷ್ಟು ಬಡ್ಡಿ ಸಹಾಯಧನ ನೀಡಲಿದೆ.

ಫಲಾನುಭವಿಗೆ ಟೂಲ್‌ ಕಿಟ್‌ ಖರೀದಿಗಾಗಿ ಯೋಜನೆಯಡಿ ₹15 ಸಾವಿರ ಮೌಲ್ಯದ ಇ-ವೋಚರ್ಸ್‌ ಅಥವಾ ಇ-ರುಪಿ ನೀಡಲಾಗುತ್ತದೆ. ಸರ್ಕಾರದ ಪರವಾಗಿ ಈ ಪ್ರೋತ್ಸಾಹಧನದ ವೋಚರ್ಸ್‌ಗಳನ್ನು ಬ್ಯಾಂಕ್‌ ಮೂಲಕ ನೀಡಲಾಗುತ್ತದೆ. ಯೋಜನೆಯಡಿ ನೋಂದಣಿಯಾದ ಕುಶಲಕರ್ಮಿಗಳಿಗೆ ಜಿಲ್ಲಾ ಮಟ್ಟದ ಸಮಿತಿಯಿಂದ ಕುಶಲಕರ್ಮಿ ಎಂದು ದೃಢೀಕರಿಸಿದ ನಂತರ 5 ರಿಂದ 7 ದಿನಗಳ ತರಬೇತಿಯನ್ನು ನೀಡಲಾಗುತ್ತದೆ.

ಶೇ 5ರಷ್ಟು ಬಡ್ಡಿದರದ ಅಡಿ ಒಟ್ಟು 3 ಲಕ್ಷ ರೂಪಾಯಿಯ ಖಾತರಿ ರಹಿತ ಬ್ಯಾಂಕ್ ಸಾಲ ದೊರೆಯಲಿದೆ. ಮೊದಲ ಕಂತಿನಲ್ಲಿ ದೊರೆತ 1 ಲಕ್ಷ ರೂಪಾಯಿ ಸಾಲಕ್ಕೆ 18 ತಿಂಗಳ ಮರುಪಾವತಿ ಗಡುವು ನೀಡಲಾಗುತ್ತದೆ. ಎರಡನೇ ಕಂತಿನಲ್ಲಿ ದೊರೆತ 2 ಲಕ್ಷ ರೂಪಾಯಿ ಸಾಲ ಮರುಪಾವತಿಗೆ 30 ತಿಂಗಳ ಗಡುವು ನೀಡಲಾಗುತ್ತದೆ.

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಸ್ಕ್ಯಾನ್ ಮಾಡಿದ ಪ್ರತಿ: ಹೌದು

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ


ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ಪಿಎಂ ವಿಶ್ವಕರ್ಮ ಯೋಜನೆ?

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts