Search This Blog

Friday, May 10, 2024

KAS ESSAY : ಬರ ಪರಿಹಾರ ನೀತಿ ಸಂಹಿತೆ ಅಡ್ಡಿಯಾಗಲ್ಲ

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Friday, May 10, 2024

ಬರ ಪರಿಹಾರ ನೀತಿ ಸಂಹಿತೆ ಅಡ್ಡಿಯಾಗಲ್ಲ

 

ಬರ ಪರಿಹಾರ; ನೀತಿ ಸಂಹಿತೆ ಅಡ್ಡಿಯಾಗಲ್ಲ


ಕಳೆದ ಒಂದು ವಾರದಿಂದ ರಾಜ್ಯದ ಹಲವೆಡೆ ಅಲ್ಲಲ್ಲಿ ಮಳೆಯಾಗುತ್ತಿದ್ದರೂ ಬಾಯ್ದೆರೆದ ಭೂಮಿಗೆ ಯಾವುದಕ್ಕೂ ಈ ಮಳೆ ಸಾಲದಂತಾಗಿದೆ. ಕಳೆದ ಮೂರಾಲ್ಕು ತಿಂಗಳಿಂದ ರಾಜ್ಯದ ಜನರು ಹಿಂದೆಂದೂ ನೋಡದಂತಹ ಬಿಸಿಲನ್ನು ನೋಡಿದ್ದಾರೆ. ಈಗಲೂ ಅನೇಕ ಭಾಗಗಳಲ್ಲಿ ಬಿಸಿ ಗಾಳಿ ಬೀಸುತ್ತಿದೆ. ಬಹುತೇಕ ಜಿಲ್ಲೆಗಳಲ್ಲಿ ಬರ ತೀವ್ರವಾಗಿದೆ. ಕುಡಿಯವ ನೀರು, ಮೇವು ಸಿಗದೆ ಜಾನುವಾರುಗಳು ಕಂಗೆಟ್ಟಿವೆ. ರೈತರ ಬೆಳೆಯೂ ನಾಶವಾಗಿದೆ. 

  • 29 ಜಿಲ್ಲೆಗಳ 
  • 149 ತಾಲೂಕುಗಳ 
  • 1,084 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ 
  • 1,920 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. 

ಕೊಳವೆಬಾವಿಗಳು ಬತ್ತಿವೆ. ನೀರಿನ ಮೂಲಗಳಾದ ಕೆರೆಗಳು ಒಣಗಿವೆ. ಬೆಂಗಳೂರು ಮಹಾನಗರ ಸೇರಿದಂತೆ ರಾಜ್ಯದ ಬಹುತೇಕ ನಗರ, ಪಟ್ಟಣಗಳಿಗೆ ನೀರು ಒದಗಿಸುತ್ತಿದ್ದ ರಾಜ್ಯದ ಬಹುಪಾಲು ಜಲಾಶಯಗಳಲ್ಲಿಯೂ ನೀರಿನ ಸಂಗ್ರಹ ಮಟ್ಟ ಕುಸಿದಿದೆ. ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಭಾಗಗಳು ಬಿಸಿಲಿನ ಬೇಗೆಗೆ ತತ್ತರಿಸಿಹೋಗಿವೆ. ಕಾದ ಹೆಂಚಿನ ಮೇಲೆ ಬದುಕು ಎಂಬಂತಾಗಿದೆ ಅಲ್ಲಿಯ ಜನರ ಸ್ಥಿತಿ. 

22 ನಗರ ಸ್ಥಳೀಯ ಸಂಸ್ಥೆಗಳ 188 ವಾರ್ಡ್‌ಗಳಲ್ಲಿಯೂ ನೀರಿನ ಕೊರತೆ ಎದುರಾಗಿದ್ದು, ಟ್ಯಾಂಕರ್‌ಗಳ ಮೂಲಕ ನೀರು ಒದಗಿಸಲಾಗುತ್ತಿದೆ. ಕೆಲವು ಕಡೆ ಖಾಸಗಿ ಕೊಳವೆಬಾವಿ ಗಳನ್ನೂ ಬಾಡಿಗೆಗೆ ಪಡೆದು ನೀರು ಕೊಡಲಾಗುತ್ತಿದೆ. ಜಾನುವಾರುಗಳಿಗೆ ಮೇವು ಪೂರೈಸಲು ಮೇವು ಬ್ಯಾಂಕ್‌ಗಳನ್ನು ಸ್ಥಾಪಿಸಲಾಗಿದ್ದರೂ ಅವು ಸಾಕಾಗುತ್ತಿಲ್ಲ. ಕೆಲವು ಗೋಶಾಲೆಗಳೂ ನೀರಿನ ಕೊರತೆ ಎದುರಿಸುತ್ತಿವೆ. ಸಮಸ್ಯಾತ್ಮಕ ಪ್ರದೇಶಗಳನ್ನು ಚುನಾವಣೆಗೆ ಮೊದಲೇ ಗುರುತಿಸಲಾಗಿತ್ತು. ತಕ್ಷಣವೇ ನೀರು ಪೂರೈಸಲು ಟ್ಯಾಂಕರ್‌ಗಳಿಗೆ ಟೆಂಡರ್ ಕೂಡ ಕರೆಯ ಲಾಗಿತ್ತು. ಆದರೆ ಚುನಾವಣೆ ಕಾರಣಕ್ಕೆ ಕಾರ್ಯಾದೇಶ ನೀಡಿರಲಿಲ್ಲ. ಇದೀಗ ರಾಜ್ಯದಲ್ಲಿ ಎರಡು ಹಂತಗಳಲ್ಲಿ ಮತದಾನ ಪ್ರಕ್ರಿಯೆ ಪೂರ್ಣ ಗೊಂಡಿದೆ. ಬರದಿಂದ ಬಸವಳಿದಿರುವ ಜನರಿಗೆ ಪರಿಹಾರ ಒದಗಿಸಲು ಆಡಳಿತದ ಚುಕ್ಕಾಣಿ ಹಿಡಿದವರು ಹಾಗೂ ಅಧಿಕಾರಿಗಳು ಮುಂದಾಗ ಬೇಕಿದೆ. ಕುಡಿಯುವ ನೀರು ಒದಗಿಸುವ ಕಾರ್ಯದಲ್ಲಿ ತೊಡಗಿಕೊಳ್ಳ ಬೇಕಿದೆ. ಬರ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಚುನಾವಣಾ ನೀತಿ ಸಂಹಿತೆ ಅಡ್ಡಿ ಆಗುವುದಿಲ್ಲ. ಈಗ ಯಾವುದೇ ನೆಪ ಹೇಳದೆ ಜನರ ಸಮಸ್ಯೆಗಳನ್ನು ಆಲಿಸಬೇಕು ಮತ್ತು ಸಮಸ್ಯೆ ಪರಿಹಾರಕ್ಕೆ ಧಾವಿಸಬೇಕು.

Download Link given below Click & download

ಫೈಲ್ ಭಾಷೆ: ಕನ್ನಡ/ಇಂಗ್ಲಿಷ್

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ರಾಜ್ಯ: ಕರ್ನಾಟಕ

ಪ್ರಕಟಣೆ ದಿನಾಂಕ: 2024

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪುkpsc2019

ಸ್ಕ್ಯಾನ್ ಮಾಡಿದ ಪ್ರತಿ: ಹೌದು

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ

 

ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

 

PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆhttps://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು PDF ಗಳನ್ನು ರೀತಿಯಲ್ಲಿ ಮಾತ್ರ ಬಳಸಿ. ಮತ್ತು PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading KAS ESSAY : ಬರ ಪರಿಹಾರ ನೀತಿ ಸಂಹಿತೆ ಅಡ್ಡಿಯಾಗಲ್ಲ

Previous
« Prev Post

No comments:

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Ad Code

Blog Archive

My Blog List

Followers

Popular Posts